1:31 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು