6:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು