6:45 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು