4:28 AM Friday24 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು