2:18 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು