6:37 AM Friday5 - September 2025
ಬ್ರೇಕಿಂಗ್ ನ್ಯೂಸ್
ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ…

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು