10:45 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು