3:01 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು