12:39 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು