6:19 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 19:36

ಬೆಳಗಾವಿ ಸುವರ್ಣಸೌಧ(reporterkarnataka.com):
ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು.
ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರು ನೀಡಿದ ಸೂಚನೆಗಳು


– ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ.

– ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

– ಯೋಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

– ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

– ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.

– 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.

– ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.

– ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.

– ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು

ಇತ್ತೀಚಿನ ಸುದ್ದಿ

ಜಾಹೀರಾತು