8:02 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 19:36

ಬೆಳಗಾವಿ ಸುವರ್ಣಸೌಧ(reporterkarnataka.com):
ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು.
ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರು ನೀಡಿದ ಸೂಚನೆಗಳು


– ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ.

– ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

– ಯೋಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

– ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

– ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.

– 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.

– ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.

– ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.

– ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು

ಇತ್ತೀಚಿನ ಸುದ್ದಿ

ಜಾಹೀರಾತು