8:14 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ

01/09/2021, 18:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುವುದು. ಹಾಗೆ ಪ್ರವಾಹ

ಪರಿಹಾರವನ್ನು ಫಲಾನುಭವಿಯ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪ್ರವಾಹ ಸಂತ್ರಸ್ತರು ನಡೆಸುತ್ತಿರುವ  ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ಹಿಪ್ಪರಗಿ ಆಣೆಕಟ್ಟು ಹಿನ್ನೀರಿನ ಸಂಘದ ಅಧ್ಯಕ್ಷ ರಮೇಶ್ ಗೌಡ ಪಾಟೀಲ್  ಮಾತನಾಡಿ, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು  ಹಳ್ಳಿಗಳು ಜಲಾವೃತಗೊಂಡ ಕಾರಣ 2005ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಸರ್ಕಾರ ನೀಡಿದ ಆಶ್ವಾಸನೆಯಂತೆ 2006ರಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ  ಬಿಡಬೇಕಿತ್ತು. ಆದರೆ ಇದುವರೆಗೂ ಸರ್ಕಾರ ಇತ್ತ ಕಡೆ ಗಮನ ಹರಿಸಿಲ್ಲ. ಇನ್ನಾದರೂ ಆದಷ್ಟು ನಮಗೆ ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದರು.

ಇತ್ತೀಚಿನ ಸುದ್ದಿ

ಜಾಹೀರಾತು