8:03 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಕೃಷ್ಣರಾಜಪೇಟೆ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ; ಎಲ್ಲೆಡೆ ಸಂಭ್ರಮ- ಸಡಗರ

09/03/2022, 17:56

ಮಂಡ್ಯ(reporterkarnataka.com):
ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.


ಪುರಸಭೆಯ ಅಧ್ಯಕ್ಷೆ ಮಹಾದೇವಿ ನಂಜುಂಡ, ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ತಹಶೀಲ್ದಾರ್ ಎಂ.ವಿ.ರೂಪಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಅವರು ರಥದಲ್ಲಿ ವಿರಾಜಮಾನವಾಗಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.


ಕೋವಿಡ್  ಹಿನ್ನೆಲೆಯಲ್ಲಿ ರಥೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ರೂಪಾ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಹಬ್ಬ ಹರಿದಿನಗಳು ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಸಾರ್ಥಕತಾ ಭಾವನೆಯು ಮೂಡುತ್ತದೆ ಎಂದು ಹೇಳಿದರು..


ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ಸದಸ್ಯರಾದ ಹೆಚ್.ಆರ್.ಲೋಕೇಶ್, ಹೆಚ್.ಡಿ.ಅಶೋಕ್, ಶಾಮಿಯಾನ ತಿಮ್ಮೇಗೌಡ, ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಡಿ.ಪ್ರೇಮಕುಮಾರ್, ರವೀಂದ್ರಬಾಬು, ಕಲ್ಪನಾದೇವರಾಜು, ಶೋಭಾ, ‌ರಾಜಸ್ವ ನಿರೀಕ್ಷಕಿ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಸಮಾಜಸೇವಕರಾದ ಕೆ.ಜಿ.ಸೋಮಶೇಖರ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು