12:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೃಷ್ಣರಾಜಪೇಟೆ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ; ಎಲ್ಲೆಡೆ ಸಂಭ್ರಮ- ಸಡಗರ

09/03/2022, 17:56

ಮಂಡ್ಯ(reporterkarnataka.com):
ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.


ಪುರಸಭೆಯ ಅಧ್ಯಕ್ಷೆ ಮಹಾದೇವಿ ನಂಜುಂಡ, ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ತಹಶೀಲ್ದಾರ್ ಎಂ.ವಿ.ರೂಪಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಅವರು ರಥದಲ್ಲಿ ವಿರಾಜಮಾನವಾಗಿದ್ದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.


ಕೋವಿಡ್  ಹಿನ್ನೆಲೆಯಲ್ಲಿ ರಥೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ರೂಪಾ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಹಬ್ಬ ಹರಿದಿನಗಳು ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಗವಂತನ ನಾಮಸ್ಮರಣೆ ಮಾಡಿದಾಗ ಮನಸ್ಸಿಗೆ ಶಾಂತಿ ನೆಮ್ಮದಿಯು ದೊರೆಯುವ ಜೊತೆಗೆ ಸಾರ್ಥಕತಾ ಭಾವನೆಯು ಮೂಡುತ್ತದೆ ಎಂದು ಹೇಳಿದರು..


ಪುರಸಭೆಯ ಮುಖ್ಯಾಧಿಕಾರಿ ಕುಮಾರ್, ಸದಸ್ಯರಾದ ಹೆಚ್.ಆರ್.ಲೋಕೇಶ್, ಹೆಚ್.ಡಿ.ಅಶೋಕ್, ಶಾಮಿಯಾನ ತಿಮ್ಮೇಗೌಡ, ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಡಿ.ಪ್ರೇಮಕುಮಾರ್, ರವೀಂದ್ರಬಾಬು, ಕಲ್ಪನಾದೇವರಾಜು, ಶೋಭಾ, ‌ರಾಜಸ್ವ ನಿರೀಕ್ಷಕಿ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಸಮಾಜಸೇವಕರಾದ ಕೆ.ಜಿ.ಸೋಮಶೇಖರ್ ಸೇರಿದಂತೆ ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು