1:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೃಷ್ಣರಾಜಪೇಟೆ: ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ- ದೊಡ್ಡಯ್ಯ ಜೋಡಿ ರಥೋತ್ಸವದ ವೈಭವ

19/03/2022, 08:49

ಮಂಡ್ಯ(reporterkarnataka.com): ಕೃಷ್ಣರಾಜಪೇಟೆ ತಾಲ್ಲೂಕಿನ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ- ದೊಡ್ಡಯ್ಯ ಜೋಡಿರಥಗಳ ವೈಭವದ ಬ್ರಹ್ಮರಥೋತ್ಸವ ನಡೆಯಿತು. ಭಕ್ತಾದಿಗಳು ಜಯಘೋಷ ಮುಗಿಲು ಮುಟ್ಟಿ ಸಂಭ್ರಮಿಸಿತು.

ನಗರೂರು-ಮಾರ್ಗೋನಹಳ್ಳಿ ಅವಳಿ ಗ್ರಾಮಗಳ ಸಮೀಪದಲ್ಲಿರುವ ಹಾಲುಮತ ಕುರುಬ ಸಮಾಜದ ಆರಾಧ್ಯದೈವ  ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ-ದೊಡ್ಡಯ್ಯ ಜೋಡಿ ರಥದ ಸಂಭ್ರಮ ನಡೆಯಿತು.ಸಚಿವ ನಾರಾಯಣಗೌಡ ರಥೋತ್ಸವದಲ್ಲಿ ಭಾಗವಹಿಸಿದರು. ಕುರಿಗಳಿಂದ ಮರಡಿಲಿಂಗೇಶ್ವರ ದೇವಾಲಯದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಭಕ್ತಿಯ ಸಮರ್ಪಣೆ ಮಾಡಲಾಯಿತು.

ಉಘೇ ದೊಡ್ಡಯ್ಯ..ಉಘೇ ಚಿಕ್ಕಯ್ಯ…ಎಂದು ಜಯಘೋಷ ಮುಗಿಲು ಮುಟ್ಟಿತು.ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚಿನ ಭಕ್ತರು ಜೋಡಿ ರಥೋತ್ಸವದಲ್ಲಿ ಪಾಲ್ಗೊಂಡರು.

ಹಾಲುಮತ ಕುರುಬ ಸಮಾಜದ ಮುಖಂಡರು ಹಾಗೂ ಮರಡಿಲಿಂಗೇಶ್ವರ ಸ್ವಾಮಿಯ ಒಕ್ಕಲಿಗೆ ಸೇರಿದ ಹೆಗಡಿ ಕೆ.ಎನ್.ಕೃಷ್ಣ, ಮೂಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಸದಸ್ಯ ಕೆ.ಶ್ರೀನಿವಾಸ್, ಎಪಿಎಂಸಿ ಮಾಜಿನಿರ್ದೇಶಕ ಕೆ.ವೇಣುಗೋಪಾಲ, ಕೆ.ಪುರುಷೋತ್ತಮ, ಮಾರ್ಗೋನಹಳ್ಳಿ ತಮ್ಮಯ್ಯ, ನಂಜೇಗೌಡ, ಆದಿಹಳ್ಳಿ ಮೀನಾಕ್ಷಿ, ಕಾರಿಗನಹಳ್ಳಿ ಕುಮಾರ್ ಮತ್ತಿತರರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು