9:26 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಪರಿಹಾರ ಘೋಷಣೆ

17/09/2025, 12:22

ಬೆಂಗಳೂರು(reporterkarnataka.com): ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ-ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ‌. ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗುವ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಅದರಂತೆ ನಮ್ಮ ಸರ್ಕಾರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ 30 ಲಕ್ಷ ಕೊಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಜೊತೆಗೆ ಕಾಲುವೆ ನೀರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ ಜಮೀನಿಗೆ 30 ಲಕ್ಷ, ಒಣ ಭೂಮಿಗೆ 25 ಲಕ್ಷ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.
ಆಲಮಟ್ಟಿ ಜಲಾಶಯವನ್ನು
519ರಿಂದ 524 ಮೀಟರ್‌ ರವರೆಗೂ ಎತ್ತರಿಸುವುದರಿಂದ 75 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ. ಒಂದೇ ಹಂತದಲ್ಲಿ ಭೂಸ್ವಾಧೀನ ಖರೀದಿ ಮೂಲಕ ಸ್ವಾಧೀನಕ್ಕೆ ತೀರ್ಮಾನ ಮಾಡಲಾಗಿದೆ.
ಹಿಂದಿನ ಸರ್ಕಾರದಲ್ಲಿ ಒಣಭೂಮಿಗೆ 20 ಲಕ್ಷ, ನೀರಾವರಿಗೆ 24 ಲಕ್ಷ ತೀರ್ಮಾನ ಮಾಡಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ರೈತ ಸಂಘಟನೆಗಳು, ಎಲ್ಲಾ ಪಕ್ಷದ ಶಾಸಕರೊಂದಿಗೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಹಲವು ಸಭೆ ನಡೆಸಿ, ಅಭಿಪ್ರಾಯ ಪಡೆದಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಇವತ್ತಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿದೆ‌. ಇದರಿಂದ ನಮ್ಮ ಭಾಗದ ಜನರಿಗೆ ಸಂತಸ ಆಗಲಿದೆ. ನುಡಿದಂತೆ ನಡೆಯುವುದು ನಮ್ಮ ಸರ್ಕಾರ. ಜನರಿಗೆ ನೀಡಿದ್ದ ಭರವಸೆಯಂತೆ ಈಡೇರಿಸಲಾಗುತ್ತಿದೆ‌. ಹುಟ್ಟುಹಬ್ಬದ ದಿನದಂದೇ ನಮ್ಮ ಭಾಗದ ಜನರ ಹೋರಾಟಕ್ಕೆ ಫಲ ಸಿಕ್ಕಿರುವುದು ಮತ್ತಷ್ಟು ನನಗೆ ಸಂತಸ ತಂದಿದೆ ಎಂದು ಸಚಿವ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು