2:30 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 33ನೇ ಶಾಖೆ ಉದ್ಘಾಟನೆ

17/07/2024, 23:30

ಸಹಕಾರ ಕ್ಷೇತ್ರದಿಂದ ತಳಮಟ್ಟದ ಸೇವೆ: ಡಾ| ಎಂಎನ್‌ಆರ್

ಮಂಗಳೂರು(reporterkarnataka.com):

ರಾಷ್ಟ್ರೀಕೃತ ಬ್ಯಾಂಕ್‌ಗಳು ಒಂದಕ್ಕೊಂದು ವಿಲೀನಗೊಳ್ಳುತ್ತಿದ್ದರೆ, ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಸುರತ್ಕಲ್ ಕೃಷ್ಣಾಪುರದ 6ನೇ ಬ್ಲಾಕ್‌ನಲ್ಲಿರುವ ಎಚ್‌ಎನ್‌ಜಿಸಿ ಐಕನ್ ಪ್ಲಾನೆಟ್ ಕಟ್ಟಡದಲ್ಲಿ ಸೋಮವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮಶಕ್ತಿ ಸಹಕಾರ ಸಂಘವು ಕ್ಷಿಪ್ರಗತಿಯಲ್ಲಿ 33 ಶಾಖೆಯವರೆಗೆ ವಿಸ್ತರಿಸಿರುವುದು ಅದರ ಗುಣಮಟ್ಟದ ಸೇವೆ ಹಾಗೂ ಗ್ರಾಹಕರ ವಿಶ್ವಾಸಗಳಿಸುರುವುದಕ್ಕೆ ಸಾಕ್ಷಿ ಎಂದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಂಸ್ಥೆಯು ಶೇ. 95ರಷ್ಟು ಮಹಿಳಾ ಸಿಬ್ಬಂದಿಗೆ ಅವಕಾಶ ನೀಡಿರುವುದು ಶ್ಲಾಘನೀಯ ಎಂದರು.
ಮಾಜಿ ಶಾಸಕರಾದ ಮೊಯ್ದೀನ್ ಬಾವಾ, ಮಾಜಿ ಮನಪಾ ಸದಸ್ಯರಾದ ತಿಲಕ್‌ರಾಜ್ ಕೃಷ್ಣಾಪುರ ಶುಭಹಾರೈಸಿದರು. ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷ್ಣಾಪುರದಲ್ಲಿ ಕಟ್ಟಡವನ್ನು ಖರೀದಿಸಿ, ಶಾಖೆಯನ್ನು ಆರಂಬಿಸಿದ್ದೇವೆ. ಡಾ| ರಾಜೇಂದ್ರ ಕುಮಾರ್ ರವರು ಬೆನ್ನೆಲುಬಾಗಿ ಸಂಸ್ಥೆಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದರಿಂದ ಸಂಘ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಭದ್ರತಾಕೋಶ , ಗಣಕೀಕೃತ ಬ್ಯಾಂಕಿಂಗ್, ನಿರಖು ಠೇವಣಿ ಪತ್ರ ಬಿಡುಗಡೆ, ಇ-ಮುದ್ರಾಂಕ ಸೇವೆಗೆ ಗಣ್ಯರು ಚಾಲನೆ ನೀಡಿದರಲ್ಲದೆ, ನೂತನ ಗ್ರಾಹಕರಿಗೆ ವಿವಿಧ ಸೇವಾ ದಾಖಲೆ ಪತ್ರವನ್ನು ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಲ್ಯೊಟ್ಟು, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ದೇವೇಂದ್ರ ಕೋಟ್ಯಾನ್ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯಾ ವಿಜಯ್, ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮನಾಥ ಸನಿಲ್, ಚಂದ್ರಹಾಸ್ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ., ಉಮಾವತಿ , ಸಲಹೆಗಾರರಾದ ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.
*ನಿರಖು ಠೇವಣಿ ಮೇಲೆ ವಿಶೇಷ ಬಡ್ಡಿ:*
ಉದ್ಘಾಟನೆ ಪ್ರಯುಕ್ತ ನಿರಖು ಠೇವಣಿ ಮೇಲೆ ವಿಶೇಷ ಬಡ್ಡಿ, ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲ, ಇ-ಮುದ್ರಾಂಕ ಸೇವೆ, ನೆಫ್ಟ್, ಆರ್‌ಟಿಜಿಎಸ್, ವಿಮಾ ಸೌಲಭ್ಯ ಮತ್ತಿತರ ಸೇವೆ ದೊರಕಲಿದೆ.
ಆರೋಗ್ಯ ತಪಾಸಣೆ ಶಿಬಿರ
ಶಾಖೆಯ ಉದ್ಘಾಟನೆಯ ಪ್ರಯುಕ್ತ ದೇರಳಕಟ್ಟೆಯ ಯೇನಪೊಯ ವಿವಿಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರದ ವೈದ್ಯರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣೆ ಶಿಬಿರ, ಶ್ರೀನಿವಾಸ್ ಇನ್‌ಸ್ಟಿಟೂಟ್ ಆಪ್ ಡೆಂಟಲ್ ಸೈನ್ಸ್ ಮುಕ್ಕದ ವೈದ್ಯರಿಂದ ದಂತ ತಪಾಸಣೆ ನಡೆಯಿತು.
ಮನೋರಂಜನಾ ಕಾರ್ಯಕ್ರಮ
ಮನೋರಂಜನಾ ಕಾರ್ಯಕ್ರಮವು ಜಿಲ್ಲೆಯ ಪ್ರಖ್ಯಾತ ಕಲಾವಿದರಾದ ಹುಸೈನ್ ಕಾಟಿಪಳ್ಳ ಹಾಗೂ ತಂಡದಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು