2:50 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

20/11/2021, 15:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com 

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು. ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ದೇಶದ ಅನ್ನದಾತರು ಚಳಿ , ಮಳೆ , ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು . ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ , ಪೊಲೀಸ್ ಬಲ ಪ್ರಯೋಗಿಸಿತ್ತು . ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ನಿಂತರು . ಈ ಹೋರಾಟದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಪಾಣ ತ್ಯಾಗ ಮಾಡಿದ್ದು , ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ . ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ . ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ . ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪಭುತ್ವಕ್ಕೆ ಸಿಕ್ಕ ಗೆಲುವು .

ರೈತರ ಹಿತದೃಷ್ಟಿಯಿಂದ ಜೆಡಿಎಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು . ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿ ಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು . ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ . ಜೆಡಿಎಸ್ ಪಕ್ಷ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ . ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು , ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ . ಇನ್ನುಂದೆ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ ಎಂದೂ ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು