9:03 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

20/11/2021, 15:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com 

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು. ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ದೇಶದ ಅನ್ನದಾತರು ಚಳಿ , ಮಳೆ , ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು . ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ , ಪೊಲೀಸ್ ಬಲ ಪ್ರಯೋಗಿಸಿತ್ತು . ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ನಿಂತರು . ಈ ಹೋರಾಟದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಪಾಣ ತ್ಯಾಗ ಮಾಡಿದ್ದು , ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ . ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ . ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ . ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪಭುತ್ವಕ್ಕೆ ಸಿಕ್ಕ ಗೆಲುವು .

ರೈತರ ಹಿತದೃಷ್ಟಿಯಿಂದ ಜೆಡಿಎಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು . ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿ ಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು . ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ . ಜೆಡಿಎಸ್ ಪಕ್ಷ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ . ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು , ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ . ಇನ್ನುಂದೆ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ ಎಂದೂ ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು