4:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

20/11/2021, 15:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com 

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ . ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಿದ್ದ ರೈತರ ಮೇಲಿನ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಬೇಕು. ಈ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೇಂದ್ರ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ದೇಶದ ಅನ್ನದಾತರು ಚಳಿ , ಮಳೆ , ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು . ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ , ಪೊಲೀಸ್ ಬಲ ಪ್ರಯೋಗಿಸಿತ್ತು . ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ನಿಂತರು . ಈ ಹೋರಾಟದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಪಾಣ ತ್ಯಾಗ ಮಾಡಿದ್ದು , ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ . ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ . ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ . ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪಭುತ್ವಕ್ಕೆ ಸಿಕ್ಕ ಗೆಲುವು .

ರೈತರ ಹಿತದೃಷ್ಟಿಯಿಂದ ಜೆಡಿಎಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು . ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿ ಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು . ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ . ಜೆಡಿಎಸ್ ಪಕ್ಷ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ . ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು , ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ . ಇನ್ನುಂದೆ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ ಎಂದೂ ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು ಹೇಳಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು