4:19 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೆಎಸ್‌ಒಯು: ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳ; 80ಕ್ಕೂ ಹೆಚ್ಚು ಕಂಪನಿಗಳ ಪಾಲ್ಗೊಳ್ಳುವಿಕೆ

03/04/2022, 09:05

ಮೈಸೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಎಸ್.ವಿದ್ಯಾಶಂಕರ್ ತಿಳಿಸಿದರು.

ವಿವಿ ಆಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುತ್ತಿದ್ದು, ತಾಂತ್ರಿಕ ಮತ್ತು  ತಾಂತ್ರಿಕೇತರ ವಿದ್ಯಾರ್ಥಿಗಳು ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು  ಹೇಳಿದರು.

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಅಶ್ವಿನ್‌ಗೌಡ ಮಾತನಾಡಿ, ಉದ್ಯೋಗ ಮೇಳವು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಯ್ಕೆಯಾಗದವರಿಗೆ ತಮ್ಮ ಇಚ್ಛೆಯ ಅನುಸಾರವಾಗಿ ತರಬೇತಿ ನೀಡಿ ಉದ್ಯೋಗವನ್ನು ದೊರಕಿಸಿಕೊಡಲಾಗುವುದು. – ಹಾಗೆಯೇ ಸುತ್ತಮುತ್ತಲಿನ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಲಾಗುವುದು. 6000 ಜನರಿಗೆ ಉದ್ಯೋಗ ನೀಡುವ ಭರವಸೆ ಇದೆ ಎಂದರು.ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಜಗನಾಥ್, ವಿವಿ ಪ್ಲೇಟ್‌ಮೆಂಟ್ ಆಫೀಸರ್ ಹೆಚ್‌.ಆರ್‌. ಪವಿತ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು