ಇತ್ತೀಚಿನ ಸುದ್ದಿ
KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ
20/11/2025, 21:11
ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು. ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.












