1:57 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ

20/11/2025, 21:11

ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು. ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು