9:07 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ ಪ್ರಯಾಣಿಸಿ 

15/05/2022, 09:06

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಮೇ16ರಿಂದ ಶಾಲಾ-ಕಾಲೇಜುಗಳು  ರಾಜ್ಯಾದ್ಯಂತ
ಆರಂಭಗೊಳ್ಳಲಿದ್ದು, ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆ ಎಸ್ ಆರ್ ಟಿ ಸಿ ನೀಡಿರುವಂತ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತನ್ನ ನಿಗಮದ ಬಸ್ ಗಳಲ್ಲಿ ಸಂಚರಿಸುವಂತೆ ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.

ಇನ್ನೂ ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುತ್ತದೆ. ಆ ನಂತ್ರ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ, ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು