1:04 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ ಪ್ರಯಾಣಿಸಿ 

15/05/2022, 09:06

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಮೇ16ರಿಂದ ಶಾಲಾ-ಕಾಲೇಜುಗಳು  ರಾಜ್ಯಾದ್ಯಂತ
ಆರಂಭಗೊಳ್ಳಲಿದ್ದು, ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆ ಎಸ್ ಆರ್ ಟಿ ಸಿ ನೀಡಿರುವಂತ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತನ್ನ ನಿಗಮದ ಬಸ್ ಗಳಲ್ಲಿ ಸಂಚರಿಸುವಂತೆ ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.

ಇನ್ನೂ ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುತ್ತದೆ. ಆ ನಂತ್ರ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ, ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು