6:13 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ

18/12/2024, 18:45

ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಈಗಾಗಲೇ‌ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್. ವಿ. ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.
ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು
ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು