8:24 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ

18/12/2024, 18:45

ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಈಗಾಗಲೇ‌ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್. ವಿ. ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.
ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು
ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು