9:09 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಕೂ’ ಗೆ ಕಾಲಿಟ್ಟ ‘ಭಜರಂಗಿ’; ಶಿವರಾಜಕುಮಾರ್ ನಟನೆಯ ಬಹು ನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಟ್ರೈಲರ್ ಬಿಡುಗಡೆ

21/10/2021, 10:18

ಬೆಂಗಳೂರು(reporterkarnataka.com): ಹ್ಯಾಟ್ರಿಕ್ ಹೀರೋ ಡಾ.  ಶಿವರಾಜ್ ಕುಮಾರ್ ಅವರು  ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ – ಕೂ ಸೇರಿದ್ದು,   @NimmaShivanna ಹ್ಯಾಂಡಲ್ ಬಳಸಿ ಭಜರಂಗಿ 2 ಟ್ರೈಲರ್ ಪೋಸ್ಟರ್ ಹಂಚಿಕೊಂಡಿದ್ದಾರೆ. 

ಶಿವರಾಜ್ ಕುಮಾರ್ ಅವರು ‘ಕೂ’ ಸೇರುವ ಮೂಲಕ ಭಾರತದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಅವರವರ ಭಾಷೆಯಲ್ಲೇ ತಲುಪಲಿದ್ದಾರೆ. ಇನ್ನಷ್ಟು ಜನರಿಗೆ ಹತ್ತಿರವಾಗಲಿದ್ದಾರೆ. ಅಭಿಮಾನಿಗಳು ಅವರ ಮುಂದಿನ ಸಿನೆಮಾಗಳ ಕುರಿತು ಕೂ ನಲ್ಲಿ ತಿಳಿಯಬಹುದು.  ಈಗಾಗಲೇ ಮುಖ್ಯಮಂತ್ರಿ ಸೇರಿ ವಿವಿಧ ಗಣ್ಯರು ಕೂ ಮೂಲಕ ಜನರನ್ನು ತಲುಪುತ್ತಿದ್ದಾರೆ. 

ನಿರ್ದೇಶಕ ಎ. ಹರ್ಷ ಮತ್ತು ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಭಜರಂಗಿ 2’ ಚಿತ್ರದ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್​ ಮತ್ತು ಪೋಸ್ಟರ್​ಗಳು ಭಾರಿ ಹೈಪ್​ ಸೃಷ್ಟಿಸಿವೆ. ಈಗ ಶಿವರಾಜ್ ಕುಮಾರ್ ಅವರು ಕೂ ವೇದಿಕೆಯಲ್ಲಿ  ಟ್ರೈಲರ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಮನ ತಣಿಸಿದ್ದಾರೆ. 

ಸೂಪರ್​ ನ್ಯಾಚುರಲ್​ ಅಂಶಗಳನ್ನು ಹೊಂದಿರುವ ಈ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಅನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ನಾಯಕ ನಟ ಶಿವರಾಜ್​ಕುಮಾರ್​, ನಾಯಕಿ ಭಾವನಾ ಮೆನನ್​ ಮಾತ್ರವಲ್ಲದೇ ಎಲ್ಲ ಪಾತ್ರಗಳ ಪೋಸ್ಟರ್​ಗಳನ್ನು ತುಂಬ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ. ಕೆಲವೇ ದಿನಗಳ ಹಿಂದೆ ಹಿರಿಯ ನಟಿ ಶ್ರುತಿ, ಖಳನಟ ಲೋಕಿ, ಖಳನಟ ಚೆಲುವರಾಜು ಅವರ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿತ್ತು.

ಮಂಜು ಪಾವಗಡ, ಶಿವರಾಜ್​ ಕೆ. ಆರ್​ ಪೇಟೆ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜಯಣ್ಣ ಕಂಬೈನ್ಸ್​ ಬ್ಯಾನರ್​ನಲ್ಲಿ ‘ಭಜರಂಗಿ 2’ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು