3:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕುಡಿತದ ಮತ್ತಿನಲ್ಲಿ ಸರಕಾರಿ ಬಸ್ ಮೇಲೆ ಮದ್ಯದ ಬಾಟಲಿ ಎಸೆತ; ಚಾಲಕನಿಗೆ ಹಿಗ್ಗಾಮುಗ್ಗ ಥಳಿತ: 4 ಮಂದಿ ಪುಂಡರ ಬಂಧನ

08/07/2023, 12:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಣ್ಣೆಯ ಮತ್ತಿನಲ್ಲಿದ್ದ ನಾಲ್ವರು ಯುವಕರು ಕೆಎಸ್ಸಾರ್ಟಿಸಿ ಬಸ್ ಮೇಲೆ ಖಾಲಿ ಮಧ್ಯದ ಬಾಟಲಿ ಎಸೆದು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಕುಡಿದ ಮತ್ತಿನಲ್ಲಿ ಕಿರಣ್, ಸತೀಶ್, ಸಚಿನ್ ಹಾಗೂ ಸುಪ್ರೀತ್ ಎಂದು ಗುರುತಿಸಲಾಗಿದೆ.
ಪುಂಡರ ದಾಂಧಲೆಯಿಂದ ಬಸ್ಸಿನ ಮುಂಭಾಗದ ಗ್ಲಾಸ್ ಪುಡಿಯಾಗಿದೆ. ಚಾಲಕ ಗಾಯಗೊಂಡಿದ್ದಾರೆ.


ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಚಲಿಸುತ್ತಿದ್ದ ಕಾರಿನಿಂದ ಬಸ್ಸಿನ ಮುಂಭಾಗದ ಗ್ಲಾಸಿಗೆ ಯುವಕರ ತಂಡ ಮದ್ಯದ ಬಾಟಲಿ ಎಸೆದಿತ್ತು. ಇದನ್ನು ಪ್ರಶ್ನಿಸಿದ ಚಾಲಕ ಸತೀಶ್ ಅವರಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದರು.
ಹಲ್ಲೆಗೊಳಗಾದ ಡ್ರೈವರ್ ಸತೀಶ್ ಅವರನ್ನು ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು