6:50 PM Sunday15 - June 2025
ಬ್ರೇಕಿಂಗ್ ನ್ಯೂಸ್
ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು