5:39 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು