8:26 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕುಡಿತಕ್ಕೆ ಹಣ ನೀಡಿಲ್ಲ ಎಂದು ಹತ್ತಬ್ಬೆಯನ್ನೇ ಹೊಡೆದು  ಕೊಂದ ಪಾಪಿ ಪುತ್ರ: ದಿನಾ ಹಣಕ್ಕಾಗಿ ಪೀಡಿಸುತ್ತಿದ್ದ ದುರುಳ

11/07/2021, 08:59

ಶ್ಯಾಮಲಾ ಶಿವಪ್ರಸಾದ್ ಚಳ್ಳಕೆರೆ

info.reporterkarnataka@gmail.com

ಸಾರಾಯಿ ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೊಬ್ಬ ಹೆತ್ತಬ್ಬೆಯನ್ನೇ ಹೊಡೆದು ಸಾಯಿಸಿದ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ರತ್ನಮ್ಮ(45) ಎಂಬವರು ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದ ಹತ್ಯೆಗೀಡಾದ ನತದೃಷ್ಟೆ. ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ಆರೋಪಿ ಲೋಕೇಶ್

 ಊಟದ ವಿಚಾರದಲ್ಲಿ ತಾಯಿ ಜತೆ ಜಗಳ ತೆಗೆದಿದ್ದಾನೆ. ಬಳಿಕ ಮದ್ಯ ಸೇವನೆಗೆ ಹಣ ನೀಡುವಂತೆ ತಾಯಿಯನ್ನು ಪೀಡಿಸಿದ್ದಾನೆ. ಪ್ರತೀ ದಿನ ಈತನಿಗೆ ಹಣ ನೀಡಿ ಬೇಸತ್ತಿದ್ದ ತಾಯಿ ಮಗನ ಜೊತೆಗೆ ಈ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ತಾಯಿಯ ಕೆನ್ನೆಗೆ

ಲೋಕೇಶ್ ಬಲವಾಗಿ ಬಾರಿಸಿದ್ದಾನ. ಏಟಿನ ರಭಸಕ್ಕೆ ತಾಯಿ ರತ್ನಮ್ಮ ಕಬ್ಬಿಣದ ಬಾಗಿಲಿನ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ . 

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಮೊಳಕಾಲ್ಮೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ ಆರೋಪಿ ಲೋಕೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು