7:40 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು

08/12/2023, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.ಕಂ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು.


ಸಂಬಂಧಿಸಿದಂತೆ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಯಾವ ಅಧಿಕಾರಿಯೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ನೀರು ಪೂರೈಕೆಗೆ ಹಾಗೂ ಆರೋಗ್ಯ ಸುರಕ್ಷತೆಗೆ ಹತ್ತಾರು ಯೋಜನೆಗಳನ್ನು ಜಾರಿ ತಂದಿವೆ. ಮತ್ತು ಈ ಕುರಿತು ಭಾಷಣಗಳಲ್ಲಿ ಮಾಧ್ಯಮಗಳಲ್ಲಿ, ಸಾಕಷ್ಟು ಬೊಬ್ಬೆ ಹೊಡೆದು ಕೊಂಡು ಬಾಯಿ ಬಾಯಿ ಬಡಿದು ಕೊಳ್ಳಲಾಗುತ್ತಿದೆ. ಆದರೆ ಗ್ರಾಪಂ ಅಧಿಕಾರಿಗಳು ಹಾಗೂ ಇಲಾಖಾಧಿಕಾರಿಗಳು, ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ವರ್ತಿಸುತ್ತಿರುವುದು ಅವರ ಹೊಣೆಗೇಡಿತನ ಸಾಬೀತಾಗಿದೆ ಎಂದು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು