8:32 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು

08/12/2023, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.ಕಂ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು.


ಸಂಬಂಧಿಸಿದಂತೆ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಯಾವ ಅಧಿಕಾರಿಯೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ನೀರು ಪೂರೈಕೆಗೆ ಹಾಗೂ ಆರೋಗ್ಯ ಸುರಕ್ಷತೆಗೆ ಹತ್ತಾರು ಯೋಜನೆಗಳನ್ನು ಜಾರಿ ತಂದಿವೆ. ಮತ್ತು ಈ ಕುರಿತು ಭಾಷಣಗಳಲ್ಲಿ ಮಾಧ್ಯಮಗಳಲ್ಲಿ, ಸಾಕಷ್ಟು ಬೊಬ್ಬೆ ಹೊಡೆದು ಕೊಂಡು ಬಾಯಿ ಬಾಯಿ ಬಡಿದು ಕೊಳ್ಳಲಾಗುತ್ತಿದೆ. ಆದರೆ ಗ್ರಾಪಂ ಅಧಿಕಾರಿಗಳು ಹಾಗೂ ಇಲಾಖಾಧಿಕಾರಿಗಳು, ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ವರ್ತಿಸುತ್ತಿರುವುದು ಅವರ ಹೊಣೆಗೇಡಿತನ ಸಾಬೀತಾಗಿದೆ ಎಂದು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು