4:54 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಕುಡಿಯುವ ನೀರಿಗೆ ತತ್ಪಾರ: ಬತ್ತಿದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡಲು ಆಗ್ರಹ

22/06/2023, 16:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಜೀವ ನದಿಯಾದ ಕೃಷ್ಣಾ ನದಿ ಬತ್ತಿ ಹೋಗಿದ್ದರಿಂದ ದಿನೇ ದಿನೇ ನೀರಿನ ಕೊರತೆ ಉಂಟಾಗುತ್ತಿದೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಇತ್ತ ಕಡೆ ಸ್ವಲ್ಪ ಗಮನಹರಿಸಿ ಶೀಘ್ರವೇ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಎರಡು ಟಿಎಂಸಿ ನೀರು ಬಿಡಿಸಬೇಕೆಂದು ರಾಜ್ಯ ರೈತ ಸಂಘ ಮನವಿ ಮಾಡಿದೆ.


ಕೃಷ್ಣ ನದಿಯಿಂದ ಉತ್ತರ ಭಾಗದ ಸುಮಾರು ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆ ತೊಂದರೆಯಾಗುತ್ತಿದೆ. ನೂರಾರು ಹೆಕ್ಟರ್ ನಷ್ಟು ಕಬ್ಬು ಈಗಾಗಲೇ ನಾಶವಾಗಿದೆ. ದನಕರುಗಳು ನೀರಿಲ್ಲದೆ ದಿನಕ್ಕೆ ಪರದಾಡುವಂತಾಗಿದೆ. ಈ ತೊಂದರೆಯನ್ನು ಅರಿತು ತಾಲೂಕಿಗೆ ಕುಡಿಯುವ ನೀರನ್ನು ಪೂರೈಸಬೇಕೆಂದು ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾದ ಮಹದೇವ್ ಮಡಿವಾಳ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು