12:35 PM Sunday7 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು