5:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು