10:51 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು