5:28 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

Kudla | ದಕ್ಷಿಣ ಕನ್ನಡ ಜಿಲ್ಲೆ ಮರು ನಾಮಕರಣ ಕೂಗಿಗೆ ಶಾಸಕ ವೇದವ್ಯಾಸ ಕಾಮತ್ ಧ್ವನಿ

05/07/2025, 18:03

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ.
ಎಂದರು.
ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರುನಾಮಕರಣಕ್ಕೆ ಯಾವೆಲ್ಲಾ ಕ್ರಮಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ, ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು