11:57 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕುಡ್ಲದ ಪೊಣ್ಣು ರಿತುಗೆ ರೋಲ್ಸ್ ರಾಯ್ಸ್‌ ನಲ್ಲಿ ಉದ್ಯೋಗ: ಸ್ಪೀಕರ್ ಖಾದರ್ ಫುಲ್ ಖುಷ್; ಮನೆಗೆ ಭೇಟಿ

13/07/2025, 11:39

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್‌ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅವರು ಕುಟುಂಬದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ತುಳುನಾಡಿನ ಹೆಗ್ಗಳಿಕೆಗೆ ಪಾತ್ರಳಾದ ರಿತು ಪರ್ಣ ಅವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ ಸ್ಪೀಕರ್ ಖಾದರ್ ಅವರು ರಿತುವಿನ ಹೆತ್ತವರೊಂದಿಗೆ ಮಾತುಕತೆ ನಡೆಸಿ, ಹೆಣ್ಣು ಮಗುವಿನ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಿ ಉನ್ನತ ಹುದ್ದೆಯತ್ತ ಸಾಗುವಂತೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದರು.
ರಿತು ಪರ್ಣ ರೋಲ್ಸ್ ರಾಯ್ಸ್‌ ಕಂಪನಿಯಲ್ಲಿ 72.3 ಲಕ್ಷ ವಾರ್ಷಿಕ ಪ್ಯಾಕೇಜ್ ಸಂಬಳ ಪಡೆಯಲಿದ್ದಾರೆ. ರಿತು ರೊಬೊಟಿಕ್ಸ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಅಮೆರಿಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.


ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ ತುಳುನಾಡಿನ ಹೆಣ್ಣು ಮಗಳೊಬ್ಬಳು ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಈ ಮೂಲಕ ರೋಲ್ಸ್-ರಾಯ್ಸ್‌ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು