6:23 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕುಡ್ಲದ ಕುಂಟಿಕಾನ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಜಾಮ್!: ದುಡಿದು ಸುಸ್ತಾಗಿದ್ದ ಜನರಿಗೆ ತಲೆ ಸುತ್ತುಭರಿಸುವ ಕಿರಿಕಿರಿ!

01/06/2024, 21:04

ಮಂಗಳೂರು(reporterkarnataka.com): ಟ್ರಾಫಿಕ್ ಜಾಮ್ ಗೆ ಕಡಲನಗರಿ ಕುಡ್ಲ ಸಿಟಿ ತುಂಬಾ ಪ್ರಸಿದ್ದಿ. ಈ ಮೊದಲು ಮಂಗಳೂರಿನ ಹೃದಯಭಾಗದಲ್ಲಿ ಮಾತ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದರೆ, ಇದೀಗ ಹೊಟ್ಟೆಯ ಭಾಗದಲ್ಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ಸಾಲಿಗೆ ಕುಂಟಿಕಾನ ಜಂಕ್ಷನ್ ಕೂಡ ಸೇರಿದೆ.


ಎಜೆ ಆಸ್ಪತ್ರೆ ಸಮೀಪದ ಕುಂಟಿಕಾನ ಜಂಕ್ಷನ್ ಅಂದ್ರೆ ನಗರದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಧಿಸುವ ಜಾಗ. ಇಲ್ಲಿ ಅಪಘಾತದ ಸಾಧ್ಯತೆ ಹೆಚ್ಚಾಗಿರುವುದರಿಂದ ಹೆದ್ದಾರಿಗೆ ಫ್ಲೈ ಓವರ್ ನಿರ್ಮಿಸಲಾಗಿದೆ. ಸಿಟಿ ಬಸ್ ಹಾಗೂ ಇತರ ವಾಹನಗಳು ಫ್ಲೈ ಓವರ್ ಕೆಳಗಡೆಯಿಂದ ಹಾದು ಹೋಗುತ್ತದೆ. ಆದರೆ ಫ್ಲೈ ಓವರ್ ಕೆಳಗಡೆ ಸಮರ್ಪಕವಾದ ಸರ್ವಿಸ್ ರಸ್ತೆ ಇಲ್ಲ. ತುಂಬಾ ಕಿರಿದಾದ ಕೊರಕಲಾದ ರಸ್ತೆ ಇದೆ.
ಸುಮಾರು 25 ವರ್ಷಗಳ ಹಿಂದೆ ಕುಂಟಿಕಾನ ಜಂಕ್ಷನ್ ಜನರಿಲ್ಲದೆ ಬಣಗುಟ್ಟುತ್ತಿತ್ತು. ಅಪರೂಪಕ್ಕೆ ಇಲ್ಲಿ ಸಿಟಿ ಬಸ್ ಗಳು ನಿಲ್ಲುತ್ತಿತ್ತು. ಯಾಕೆಂದರೆ, ಬಸ್ ಏರುವವರು, ಇಳಿಯುವವರು ಇರುತ್ತಿರಲಿಲ್ಲ. ಈಗ ಎಲ್ಲ ಬಸ್ ಗಳು ನಿಲ್ಲುತ್ತದೆ. ಎಜೆ ಆಸ್ಪತ್ರೆ ಬಂದ ಬಳಿಕ ಈ ಜಂಕ್ಷನ್ ಸಾಕಷ್ಟು ಅಭಿವೃದ್ಧಿ ಹೊಂದಿದೆ. ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿದೆ. ಹೊಟೇಲ್ ಗಳು ಬಂದಿವೆ. ಜಂಕ್ಷನ್ ನಲ್ಲೇ ಶಿಕ್ಷಣ ಸಂಸ್ಥೆಯೊಂದು ಹೊಸತಾಗಿ ತಲೆ ಎತ್ತಿದೆ. ಇದರೊಂದಿಗೆ ಅನತಿ ದೂರದಲ್ಲಿ ಸೈಂಟ್ ಆ್ಯನ್ಸ್ ಶಾಲೆ ಇದೆ. ಪಕ್ಕದಲ್ಲೇ ಕೆಎಸ್ಸಾರ್ಟಿಸಿ ಡಿಪೋ, ಆಗ್ನಿಶಾಮಕ ದಳ ಕಚೇರಿ,
ಡಿ ಮಾರ್ಟ್, ಕಾರ್ ಶೋ ರೂಮ್ ಎಲ್ಲವೂ ಇದೆ. ಇವೆಲ್ಲದರ ಫಲಶ್ರುತಿ ಎಂಬಂತೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಒಂದಿಬ್ಬರು ಟ್ರಾಫಿಕ್ ಪೊಲೀಸರು ಕೂಡ ಇರುತ್ತಾರೆ. ಆದರೆ ಸಂಜೆ ವೇಳೆ ವಾಹನಗಳ ದಟ್ಟಣೆ ಹೆಚ್ಚಾಗುತ್ತದೆ. ಹಾಗೆ ಕೆಲವು ವಾಹನ ಚಾಲಕರ ಅವಸರ ಹಾಗೂ ರೂಲ್ಸ್ ಬ್ರೇಕ್ ಮಾಡುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ತಾಸುಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಶೀಘ್ರದಲ್ಲೇ ಮಂಗಳೂರು ಟ್ರಾಫಿಕ್ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು