6:28 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕುಡ್ಲದ ಪಿಲಿಪರ್ಬ- 2024ರ ಕಿರೀಟ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಮುಡಿಗೆ: ಪೊಳಲಿ ಟೈಗರ್ಸ್ ತಂಡ ದ್ವಿತೀಯ

12/10/2024, 12:06

ಮಂಗಳೂರು(reporterjarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡವು ಪಿಲಿಪರ್ಬ- 2024 ರ ಕಿರೀಟ ಮುಡಿಗೇರಿಸಿಕೊಂಡಿತು.
ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡವು ಪಡೆದುಕೊಂಡರೆ, ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಹಾಗೂ ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡಗಳು ಜಂಟಿಯಾಗಿ ತೃತೀಯ ಸ್ಥಾನವನ್ನು ಅಲಂಕರಿಸಿದವು.
ಪಿಲಿಪರ್ಬದ ವಿಶೇಷ ಬಹುಮಾನಗಳಾದ “ಕಪ್ಪು ಪಿಲಿ” ಪ್ರಶಸ್ತಿಯನ್ನು ಟ್ಯಾಲೆಂಟ್ ಟೈಗರ್ಸ್ ತುಳುನಾಡು ತಂಡ ಪಡೆದುಕೊಂಡರೆ, ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡವು “ಮರಿ ಹುಲಿ” ಪ್ರಶಸ್ತಿಯನ್ನು ಹಾಗೂ ಬಹುನಿರೀಕ್ಷಿತ ಪ್ರಶಸ್ತಿಯಾದ “ಪರ್ಬದ ಪಿಲಿ”ಯನ್ನು ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡ ಪಡೆದುಕೊಂಡಿತು.
ಶಿಸ್ತಿನ ತಂಡವಾಗಿ ಟೀಮ್ ಪರಶುರಾಮ್ ಕುಡ್ಲ ಹೊರ ಹೊಮ್ಮಿದರೆ, ಬಣ್ಣಗಾರಿಕೆ ಹಾಗೂ ಮೆರವಣಿಗೆ ವಿಭಾಗದ ದ್ವಿತೀಯ ಬಹುಮಾನವನ್ನು ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಪಡೆಯಿತು.
ಮುಡಿ ವಿಭಾಗದಲ್ಲಿ ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ಮೆರವಣಿಗೆ ವಿಭಾಗದ ಪ್ರಥಮ ಸ್ಥಾನವನ್ನು ಎಮ್.ಎಫ್.ಟಿ ಮುಳಿಹಿತ್ಲು, ಹಿಮ್ಮೇಳ ವಿಭಾಗದಲ್ಲಿ ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ಪ್ರಶಸ್ತಿಗಳನ್ನು ಬಾಚಿಕೊಂಡಿತು. ಕೊನೆಯದಾಗಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಮೂರನೇ ಆವೃತ್ತಿಯ ಪಿಲಿಪರ್ಬಕ್ಕೆ ತೆರೆ ಬಿದ್ದಿತು.
ನಟ-ನಿರ್ದೇಶಕ-ರಾಷ್ಟ್ರಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ, ರಾಜ್ ಬಿ.ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಹಾಗೂ ಜನಪ್ರಿಯ ನಟರಾದ ಅರ್ಜುನ್ ಕಾಪಿಕಾಡ್, ವಿನೀತ್ ಕುಮಾರ್, ಸಮತಾ ಅಮೀನ್, ಸೇರಿದಂತೆ ಅನೇಕ ಚಿತ್ರ ತಾರೆಯರ ದಂಡು ಕಾರ್ಯಕ್ರಮದ ಮೆರುಗು ಹೆಚ್ಚಿಸಿತ್ತು.


ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ ಸೇರಿದಂತೆ ಹಲವು ಗಣ್ಯರು ಸಂಭ್ರಮದ ಪಿಲಿಪರ್ಬಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು