5:27 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೆ ಮೆಲುಕು

04/10/2024, 21:38

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2024” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 11ರ ಶುಕ್ರವಾರದಂದು ನಡೆಯಲಿರುವ ತೃತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹತ್ತು ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಮನಪಾ ಸದಸ್ಯರುಗಳ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು