6:09 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೆ ಮೆಲುಕು

04/10/2024, 21:38

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2024” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 11ರ ಶುಕ್ರವಾರದಂದು ನಡೆಯಲಿರುವ ತೃತೀಯ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹತ್ತು ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಮನಪಾ ಸದಸ್ಯರುಗಳ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು