3:01 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ

13/08/2024, 21:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು.


ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ” ಬಾಣದ ಮನೆತನದ” ಕುಟುಂಬಸ್ಥರಿಂದ, ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ ನಡೆಯಿತು. ಶ್ರೀಊರಮ್ಮ ದೇವಿಗೆ ಶ್ರ‍ಾವಣ ಪರ್ವ ವಿಶೇಷ ಪೂಜೆ, ಪರ್ವ ಪ್ರಸಾದ ಸೇವೆ ನೆರವೇರಿಸಲಾಯಿತು. ಬಾಣದ ವಂಶಸ್ಥ ಕುಟುಂಬದವರು, ಹಲವು ವರ್ಷಗಳಿಂದ ಪ್ರತಿ ವರ್ಷದ ಶ್ರಾವಣ ಮಾಸದಲ್ಲಿ ಸಾರ್ವಜನಿಕರಿಗೆ ಪರ್ವ ಪ್ರಸಾದ ಸೇವೆ ಜರುಗಿಸುತ್ತಾರೆ. ವಾಲ್ಮೀಕಿ ಸಮುದಾಯದ ಬಾಣದ ವಂಸ್ಥರ ಕುಟುಂಬದವರು ಸಾಮೂಹಿಕವಾಗಿ ಸಹಭಾಗಿತ್ವದೊಂದಿಗೆ, ಪ್ರತಿ ವರ್ಷದ ಶ್ರಾವಣ ಮಾಸದ ಮಂಗಳವಾರದಂದು. ಶ್ರೀಊರಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಪರ್ವ ಪ್ರಸಾದ ಸೇವೆ ನೆರವೇರಿಸುತ್ತಿದ್ದಾರೆ, ಅಂತೆಯೇ ಇಂದು ಶ್ರ‍ವಣ ಮಾಸದ ಮಂಗಳವಾರದಂದು ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಆವರಣದಲ್ಲಿ. ವಿಶೇಷ ಪರ್ವ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು, ಪ್ರಸಾದ ಸಂದರ್ಭದಲ್ಲಿ ಪಟ್ಟಣದ ನೂರಾರು ಭಕ್ತರು ಸೇರಿದಂತೆ. ಸುತ್ತ ಮತ್ತಲಿನ ಕೆಲವು ಗ್ರಾಮಗಳಲ್ಲಿನ ನೂರಾರು ಭಕ್ತರು, ನಾಗರೀಕರು ಹಿರಿಯರು ಮಹಿಳೆಯರು ಮಕ್ಕಳು. ಶ್ರೀಊರಮ್ಮ ದೇವಿಯ ದರ್ಶನ ಪಡೆದು ನಂತರ, ದೇವಸ್ಥಾನದ ಆವರಣದಲ್ಲಿನ ಪರ್ವದಲ್ಲಿ ಭಾಗವಿಹಿಸಿ ಪ್ರಸಾದ ಸ್ವೀಕರಿಸಿದರು. ಬಾಣದ ಮನೆತನದ ಕುಟುಂಬಸ್ಥರು ಎಲ್ಲಾ ಹಿರಿಯರು, ಅವರ ನೆಂಟರು ಬಂಧು ಬಳಗ ಸ್ನೇಹಿತರು ಹಿತೈಷಿಗಳು. ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ, ಪ್ರಸಾದ ಪರ್ವದಲ್ಲಿ ಸಕ್ತೀಯವಾಗಿ ಪಾಲ್ಗೊಂಡು, ಪರ್ವ ಪ್ರಸಾದ ಸೇವೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು