4:21 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು