9:56 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು