4:41 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು