10:17 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು