10:21 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: 2 ಪ್ರತ್ಯೇಕ ಕರಡಿ ದಾಳಿ ಪ್ರಕರಣ; ಯುವಕ ಮತ್ತು ನಡು ವಯಸ್ಕ ಮಹಿಳೆಗೆ ಗಾಯ; ಸ್ಥಳೀಯರ ಆಕ್ರೋಶ

18/07/2022, 16:23

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಓಬಳಶೆಟ್ಟಿ ಹಳ್ಳಿ ಹಾಗೂ ಹುಲಿಕೊಂಟೆ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತನಾದ ಕಾಡಪ್ಪರ ಸೋಮಶೇಖರ್ (38) ಎಂಬವರು ತನ್ನ ಜಮೀನಿನಲ್ಲಿ ಬೆಳಗಿನ ಜಾವ ನೀರು ಹಾಯಿಸುವ ಸಂದರ್ಭದಲ್ಲಿ ಕರಡಿಯು  ದಾಳಿ ಮಾಡಿ ಕೈ ಬೆರಳನ್ನು ತುಂಡು ತುಂಡಾಗಿ ಮಾಡಿದೆ. ಇನ್ನೊಂದು ಪ್ರಕರಣದಲ್ಲಿ ಹುಲಿಕುಂಟೆ ಗ್ತಾಮದ ಓಬಕ್ಕ(45) ಎಂಬವರು


ಬರ್ಹಿದೆಸೆಗೆಂದು ಗ್ರಾಮದ ಅಂಚಿನ ಹೊಲಕ್ಕೆ ತೆರಳಿದ ಸಂದರ್ಭದಲ್ಲಿ ಕರಡಿ ದಾಳಿ ಮಾಡಿದೆ. ಓಬಕ್ಕ ತೀರ್ವ ಗಾಯಗೊಂಡಿದ್ದು ಚಿಕ್ಕಜೋಗಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗೆ  ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

ಈ ರೀತಿ  ಪದೇ ಪದೇ ಇಂತಹ ಘಟನೆಗಳು ತಾಲ್ಲೂಕಿನಲ್ಲಿ ನಡೆಯುತ್ತಿವೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಗ್ರಾಮದ ಜನರನ್ನು ವಿಚಾರಿಸಿ ಕಾಡಂಚಿನಲ್ಲಿ   ಕರಡಿಯ ಬೋನುಗಳನ್ನು ಹಾಕಿ ಕರಡಿಗಳನ್ನು ಹಿಡಿದು ಕರಡಿ ಧಾಮಕ್ಕೆ ಬಿಡಬೇಕು. ಇಂತಹ ಘಟನೆಗಳನ್ನು ತಪ್ಪಿಸಬೇಕು ಎಂದು  ಗ್ರಾಮಗಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು